ADVERTISEMENT

ಬಿಹಾರದಲ್ಲಿ ಪ್ರವಾಹ ಸ್ಥಿತಿ: ಐದು ಮಂದಿ ಸಾವು, ಸಿಎಂ ಪರಿಶೀಲನೆ

ಪಿಟಿಐ
Published 21 ಸೆಪ್ಟೆಂಬರ್ 2024, 16:07 IST
Last Updated 21 ಸೆಪ್ಟೆಂಬರ್ 2024, 16:07 IST
ನಿತೀಶ್ ಕುಮಾರ್
ನಿತೀಶ್ ಕುಮಾರ್   

ಪಟ್ನಾ: ಪಟ್ನಾ ಮತ್ತು ಹಾಜಿಪುರದ ಪ್ರಮುಖ ಸ್ಥಳಗಳಲ್ಲಿ ಗಂಗಾನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪರಿಶೀಲನೆ ನಡೆಸಿದರು. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ನಾ ಜಿಲ್ಲೆಯ ದಿಘಾ ಘಾಟ್‌, ಗಾಂಧಿ ಘಾಟ್‌, ಹತಿದಾ ಮತ್ತು ಮನೇರ್‌ ಪ್ರದೇಶಗಳಲ್ಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ಪಟ್ನಾ ಮತ್ತು ಹಾಜಿಪುರದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಂಗಾ ನದಿ ಮಾತ್ರವಲ್ಲದೆ, ರಾಜ್ಯದ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಪ್ರವಾಹದಿಂದಾಗಿ ಸಾರನ್‌ನಲ್ಲಿ ನಾಲ್ವರು ಹಾಗೂ ಭೋಜ್‌ಪುರದಲ್ಲಿ ಓರ್ವ ಸೇರಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

‘ನೀರಿನ ಮಟ್ಟ ಮತ್ತಷ್ಟು ಹೆಚ್ಚಾದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳವಂತೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಜಿಲ್ಲಾಡಳಿತ ಮತ್ತು ಸಂಬಂಧಿಸಿದ ಇತರ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ’ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.