ಅಹಮದಾಬಾದ್: ವಡೋದರಾ ಜಿಲ್ಲೆಯ ವಾಘೋಡಿಯಾ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಧರ್ಮೇಂದ್ರಸಿಂಹ ವಘೇಲಾ ಗುರುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿಗೆ ಮರಳುವುದಾಗಿ ಘೋಷಿಸಿದ್ದಾರೆ.
‘ದೇಶದಲ್ಲಿ ರಾಮರಾಜ್ಯ ಸ್ಥಾಪನೆಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೈ ಬಲಪಡಿಸಲು ಬೆಂಬಲಿಗರೊಂದಿಗೆ ಬಿಜೆಪಿಗೆ ಮರಳುತ್ತಿರುವೆ. ಕ್ಷೇತ್ರದಲ್ಲಿನ ಜನರ ಅಭಿಪ್ರಾಯ ಸಂಗ್ರಹಿಸಿದ ಬಳಿಕವೇ ಈ ನಿರ್ಧಾರ ತೆಗೆದುಕೊಂಡಿರುವೆ’ ಎಂದು ರಾಜೀನಾಮೆ ಸಲ್ಲಿಸಿದ ಬಳಿಕ ತಮ್ಮನ್ನು ಭೇಟಿಯಾದ ವರದಿಗಾರರಿಗೆ ತಿಳಿಸಿದರು.
ಎರಡು ತಿಂಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ವಘೇಲಾ ಮೂರನೇಯವರು. ಕಳೆದ ಡಿಸೆಂಬರ್ನಲ್ಲಿ ಆಮ್ಆದ್ಮಿ ಪಕ್ಷದ ಶಾಸಕ ಭೂಪೇಂದ್ರ ಭಯಾನಿ ರಾಜೀನಾಮೆ ನೀಡಿದ್ದರು. ಈಚೆಗಷ್ಟೇ ವಿಜಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಜೆ.ಚಾವಡಾ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.