ADVERTISEMENT

ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ: ಹವಾಮಾನ ಇಲಾಖೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಮೇ 2024, 12:15 IST
Last Updated 9 ಮೇ 2024, 12:15 IST
<div class="paragraphs"><p>ಬಿಸಿಗಾಳಿ ಪ್ರದೇಶ (ಪ್ರಾತಿನಿಧಿಕ ಚಿತ್ರ)</p></div>

ಬಿಸಿಗಾಳಿ ಪ್ರದೇಶ (ಪ್ರಾತಿನಿಧಿಕ ಚಿತ್ರ)

   

ನವದೆಹಲಿ: ರಾಜಸ್ಥಾನದ ಪಶ್ಚಿಮ ಭಾಗ ಮತ್ತು ಕೇರಳ ಹೊರತುಪಡಿಸಿ ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವಿಜ್ಞಾನಿ ಸೋಮಾ ಸೇನ್‌ ತಿಳಿಸಿದ್ದಾರೆ.

ನಾಳೆ (ಮೇ 10) ರಾಜಸ್ಥಾನದ ಪಶ್ಚಿಮ ಭಾಗದಲ್ಲಿ ಮಾತ್ರ ಬಿಸಿಗಾಳಿ ಇರಲಿದೆ. ಹೀಗಾಗಿ ಅಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಿಂದ ದೇಶದೊಳಗೆ ತೇವಾಂಶಭರಿತ ಗಾಳಿ ಬೀಸಲಿದ್ದು, ದೇಶದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ADVERTISEMENT

ಬಿಸಿಗಾಳಿ ಇರುವ ಕಡೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಗುಡ್ಡಗಾಡು ಪ್ರದೇಶದಲ್ಲಿ 30 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬಿಸಿಗಾಳಿ ಎನ್ನುವುದು ಗಾಳಿಯ ಉಷ್ಣತೆಯ ಸ್ಥಿತಿಯಾಗಿದ್ದು ಅದು ಉಂಟಾದಾಗ ಮಾನವನ ದೇಹಕ್ಕೆ ಮಾರಕವಾಗುತ್ತದೆ ಎಂದು ಐಎಂಡಿ ಹೇಳಿದೆ.

ಕಳೆದ ಕೆಲವು ತಿಂಗಳುಗಳಿಂದ ದೇಶದಲ್ಲಿ ಬಿಸಿಗಾಳಿ, ತಾಪಮಾನದ ಏರಿಕೆಯಿಂದಾಗಿ ಜನರು ತತ್ತರಿಸಿದ್ದರು.ಹಲವು ರಾಜ್ಯಗಳಲ್ಲಿ ಬರ ಜನರನ್ನು ಹೈರಾಣಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.