ADVERTISEMENT

ಮಧ್ಯಪ್ರದೇಶ | ಅಕ್ರಮ ಮರಳು ಗಣಿಗಾರಿಕೆ: ಅರಣ್ಯಾಧಿಕಾರಿಗಳ ಮೇಲೆ ದಾಳಿ

ಪಿಟಿಐ
Published 29 ಸೆಪ್ಟೆಂಬರ್ 2024, 15:19 IST
Last Updated 29 ಸೆಪ್ಟೆಂಬರ್ 2024, 15:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಛತರ್‌ಪುರ(ಮಧ್ಯಪ್ರದೇಶ): ಮರಳು ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ವ್ಯಕ್ತಿಗಳು ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ದಾಳಿ ನಡೆಸಿ, ಜಪ್ತಿ ಮಾಡಲಾಗಿದ್ದ ವಸ್ತುಗಳನ್ನು ಕೊಂಡೊಯ್ದ ಘಟನೆ ಮಧ್ಯಪ್ರದೇಶದ ಛತರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

‘ಅರಣ್ಯ ವ್ಯಾಪ್ತಿಯಲ್ಲಿರುವ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ ಶನಿವಾರ ದಾಳಿ ನಡೆಸಿ, ಎರಡು ಟ್ರ್ಯಾಕ್ಟರ್‌ ಟ್ರಾಲಿಗಳನ್ನು ಜಪ್ತಿ ಮಾಡಲಾಗಿತ್ತು. ಈ ವೇಳೆ ಶೈಲೇಂದ್ರ ಸಿಂಗ್‌ ಎಂಬಾತ ಅಧಿಕಾರಿಗಳ ಮೇಲೆ ಟ್ರ್ಯಾಕ್ಟರ್‌ ಟ್ರಾಲಿ ಹರಿಸಲು ಯತ್ನಿಸಿದ್ದಾನೆ’ ಎಂದು  ಅರಣ್ಯಾಧಿಕಾರಿ ರಾಜೇಂದ್ರ ಪಸ್ತಾರ್‌ ಅವರು ಭಾನುವಾರ ತಿಳಿಸಿದ್ದಾರೆ.

‘ಅರಣ್ಯ ಇಲಾಖೆಯ ವಾಹನಕ್ಕೂ ಹಾನಿಯಾಗಿದ್ದು, ಆರೋಪಿಗಳು ತಮ್ಮ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.