ನವದೆಹಲಿ: ರಷ್ಯಾ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗುವಂತಹ ಉದ್ಯೋಗಕ್ಕೆ ಸೇರಿಕೊಳ್ಳುವ ಮೂಲಕ ಅಪಾಯಕ್ಕೆ ಸಿಲುಕಿಕೊಳ್ಳಬಾರದು ಎಂದು ವಿದೇಶಾಂಗ ಸಚಿವಾಲಯ ಭಾರತೀಯರಿಗೆ ಶುಕ್ರವಾರ ಹೇಳಿದೆ.
‘ರಷ್ಯಾದಲ್ಲಿ ಉತ್ತಮ ಉದ್ಯೋಗದ ಭರವಸೆ ನೀಡಿ ನೇಮಕ ಮಾಡಿಕೊಂಡು, ನಂತರ ಆ ರಾಷ್ಟ್ರದ ಸೇನೆಗೆ ಸೇರಿಸುವ ಮೂಲಕ ಹಲವು ಭಾರತೀಯರಿಗೆ ವಂಚಿಸಲಾಗಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ಬಿಡುಗಡೆಗಾಗಿ ರಷ್ಯಾದೊಂದಿಗೆ ನಿರಂತರ ಮಾತುಕತೆ ನಡೆಸಲಾಗುತ್ತಿದೆ’ ಎಂದು ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.