ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಮಾಜಿ CM ಹೇಮಂತ್‌ ಸೊರೇನ್‌ಗೆ ಜಾಮೀನು

ಪಿಟಿಐ
Published 28 ಜೂನ್ 2024, 6:53 IST
Last Updated 28 ಜೂನ್ 2024, 6:53 IST
<div class="paragraphs"><p>ಹೇಮಂತ್‌ ಸೊರೇನ್‌</p></div>

ಹೇಮಂತ್‌ ಸೊರೇನ್‌

   

ರಾಂಚಿ: ಭೂಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 

ಈ ಕುರಿತ ಅರ್ಜಿಯನ್ನು ಜೂನ್ 13ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿತ್ತು.

ADVERTISEMENT

‘₹50 ಸಾವಿರ ಮೌಲ್ಯದ ಬಾಂಡ್ ಮತ್ತು ಇದೇ ಮೊತ್ತದ ಇಬ್ಬರು ಶೂರಿಟಿಯೊಂದಿಗೆ ಸೊರೇನ್ ಅವರನ್ನು ಜಾಮೀನಿನ ಮೇರೆಗೆ ಬಿಡುಗಡೆ ಮಾಡಬೇಕು’ ಎಂದು ನ್ಯಾಯಮೂರ್ತಿ ರಂಗೋನ್ ಮುಖ್ಯೋಪಾಧ್ಯಾಯ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. 

ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಸೊರೇನ್ ಅವರನ್ನು, ಭೂಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಇದೇ ವರ್ಷದ ಜನವರಿ 31ರಂದು ಬಂಧಿಸಿತ್ತು. ಅವರನ್ನು ಬಿರ್ಸಾ ಮುಂಡಾ ಕಾರಾಗೃಹದಲ್ಲಿರಿಸಲಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.