ನವದೆಹಲಿ: ಪಂಜಾಬ್ನಲ್ಲಿ 10 ದಿನಗಳ ವಿಪಶ್ಶನ ಧ್ಯಾನದಲ್ಲಿ ಭಾಗವಹಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ರಾಷ್ಟ್ರ ರಾಜಧಾನಿಗೆ ಮರಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿರುವ ಕೇಜ್ರಿವಾಲ್, '10 ದಿನಗಳ ವಿಪಶ್ಶನ ಧ್ಯಾನದ ಬಳಿಕ ಇಂದು ಮರಳಿದ್ದೇನೆ. ಈ ಧ್ಯಾನವು ಅಪಾರ ಶಾಂತಿಯನ್ನು ನೀಡುತ್ತದೆ. ಇಂದಿನಿಂದ ಮತ್ತೆ ಹೊಸ ಚೈತನ್ಯದೊಂದಿಗೆ ಸಾರ್ವಜನಿಕ ಸೇವೆಯನ್ನು ಪ್ರಾರಂಭಿಸುತ್ತೇನೆ. ಎಲ್ಲರಿಗೂ ಶುಭವಾಗಲಿ' ಎಂದು ತಿಳಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ಜೊತೆಗೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 3ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಮತ್ತೆ ಸಮನ್ಸ್ ಜಾರಿ ಮಾಡಿದೆ.
ಮೂರನೇ ಬಾರಿಗೆ ಇ.ಡಿ ಸಮನ್ಸ್ ಜಾರಿ ಮಾಡಿದೆ. ಈ ಮೊದಲು ನವೆಂಬರ್ 02 ಹಾಗೂ ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ನೀಡಲಾಗಿತ್ತು. ಆದರೆ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.