ADVERTISEMENT

ಕೆಪಿಸಿಸಿ ಪದಾಧಿಕಾರಿಗಳ ಸಭೆ ಇಂದು

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 16:33 IST
Last Updated 30 ಜೂನ್ 2024, 16:33 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾಯಿಸಬೇಕೆಂಬ ಕೂಗು ಜೋರಾಗುತ್ತಿದ್ದಂತೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸೋಮವಾರ (ಜುಲೈ 1) ಕೆಪಿಸಿಸಿ ಪದಾಧಿಕಾರಿಗಳ ಸಭೆ ಕರೆದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿರುವ ಸಭೆಗೆ ಎಲ್ಲ 190 ಪದಾಧಿಕಾರಿಗಳಿಗೂ ಆಹ್ವಾನ ನೀಡಲಾಗಿದೆ. ಡಿ.ಕೆ. ಶಿವಕುಮಾರ್‌ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಪಕ್ಷ ಕಟ್ಟಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಅಲ್ಲದೆ, ಅವರ ಸಾಧನೆಯ ಕುರಿತು ಕಿರುಚಿತ್ರ ಪ್ರದರ್ಶನವೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.