ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಶಿವಸೇನಾ (ಶಿಂದೆ ಬಣ) ಮತ್ತು ಎನ್ಸಿಪಿ (ಅಬಿತ್ ಪವಾರ್ ಬಣ) ಸೇರಿದಂತೆ ಇತರೆ ಮಿತ್ರಪಕ್ಷಗಳಿಗೂ ಸೂಕ್ತ ಆದ್ಯತೆ ನೀಡಲಿದೆ ಎಂದು ಪಕ್ಷದ ಪ್ರಮುಖ ನಾಯಕರೊಬ್ಬರು ಶನಿವಾರ ತಿಳಿಸಿದರು.
‘ಒಂದು ತಂಡವಾಗಿ ‘ಮಹಾಯುತಿ’ ಸ್ಪರ್ಧಿಸಲಿದೆ. ಮಿತ್ರಪಕ್ಷಗಳ ನೆರವಿನಿಂದ ಬಿಜೆಪಿ ಮತ್ತೆ ಸರ್ಕಾರ ರಚಿಸಲಿದೆ’ ಎಂದು ಹೇಳಿದರು.
ಬಿಜೆಪಿಗರೇ ಮುಂದಿನ ಮುಖ್ಯಮಂತ್ರಿ ಆಗುತ್ತಾರಾ ಎಂಬ ಪ್ರಶ್ನೆಗೆ, ‘ಮಹಾಯುತಿ’ಯಿಂದ ಬಬ್ಬರು ಮುಖ್ಯಮಂತ್ರಿ ಆಗಲಿದ್ದಾರೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.