ಮುಂಬೈ: ಈಚೆಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನಿಂದ ಹತ್ಯೆಗೀಡಾದ ಎನ್ಸಿಪಿ ಮುಖಂಡ ಬಾಬಾ ಸಿದ್ದೀಕಿ ಅವರ ಪುತ್ರ, ಮುಂಬೈ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜೀಶನ್ ಸಿದ್ದೀಕಿ ಅವರು ಇಂದು (ಶುಕ್ರವಾರ) ಅಜಿತ್ ಪವಾರ್ ನೇತೃತ್ವದ ಎನ್ಸಿಪಿಗೆ ಸೇರ್ಪಡೆಗೊಂಡಿದ್ದಾರೆ.
ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.
ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್ಸಿಪಿಗೆ ಸೇರ್ಪಡೆಗೊಂಡಿದ್ದರು. ಇದಕ್ಕೂ ಮುನ್ನ ದೀರ್ಘಕಾಲ ಕಾಂಗ್ರೆಸ್ ಸದಸ್ಯರಾಗಿದ್ದರು. ಅಕ್ಟೋಬರ್ 12ರಂದು ಬಾಬಾ ಸಿದ್ದೀಕಿ ಅವರನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.