ADVERTISEMENT

ಉತ್ತರ ಪ್ರದೇಶ | ಬಸ್‌ಗೆ ವ್ಯಾನ್ ಡಿಕ್ಕಿ: 10 ಮಂದಿ ಸಾವು, 27 ಜನರಿಗೆ ಗಾಯ

ಪಿಟಿಐ
Published 18 ಆಗಸ್ಟ್ 2024, 8:47 IST
Last Updated 18 ಆಗಸ್ಟ್ 2024, 8:47 IST
<div class="paragraphs"><p>ಅಪಘಾತದಲ್ಲಿ ಸಂಪೂರ್ಣ ನಜ್ಜುಗುಜ್ಜಾಗಿರುವ ಪಿಕ್‌ಅಪ್‌ ವ್ಯಾನ್‌&nbsp;</p></div>

ಅಪಘಾತದಲ್ಲಿ ಸಂಪೂರ್ಣ ನಜ್ಜುಗುಜ್ಜಾಗಿರುವ ಪಿಕ್‌ಅಪ್‌ ವ್ಯಾನ್‌ 

   

ಬುಲಂದ್‌ಶಹರ್‌: ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸೇಲಂಪುರದಲ್ಲಿ ವ್ಯಾನ್‌ ಮತ್ತು ಬಸ್‌ ಢಿಕ್ಕಿಯಿಂದಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನರು ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿದ್ದಾರೆ. 

ಬದೌನ್‌– ಮೀರತ್‌ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ‘ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಜಿಲ್ಲಾಧಿಕಾರಿ ಚಂದ್ರ ಪ್ರಕಾಶ್‌ ಸಿಂಗ್‌ ಅವರು ತಿಳಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.