ADVERTISEMENT

ಮುಂಬೈ | ಅಗ್ನಿ ಅವಘಡ: ಏಳು ಮಂದಿ ಸಾವು

ಪಿಟಿಐ
Published 6 ಅಕ್ಟೋಬರ್ 2024, 4:05 IST
Last Updated 6 ಅಕ್ಟೋಬರ್ 2024, 4:05 IST
<div class="paragraphs"><p>ಅಗ್ನಿ ಅವಘಡ</p></div>

ಅಗ್ನಿ ಅವಘಡ

   

(ಸಾಂದರ್ಭಿಕ ಚಿತ್ರ)

ಮುಂಬೈ: ಮುಂಬೈಯಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಇಂದು (ಭಾನುವಾರ) ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಚೆಂಬೂರು ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಬೆಳಿಗ್ಗೆ ಸುಮಾರು 5.20ಕ್ಕೆ ಅಗ್ನಿ ಅವಘಡ ಸಂಭವಿಸಿದೆ.

ಕಟ್ಟಡದ ನೆಲ ಮಹಡಿಯನ್ನು ಅಂಗಡಿಯಾಗಿ ಮತ್ತು ಮೇಲಿನ ಮಹಡಿಯನ್ನು ನಿವಾಸವಾಗಿ ಬಳಕೆ ಮಾಡಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಸುಟ್ಟ ಗಾಯಗಳೊಂದಿಗೆ ಐದು ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಬಳಿಕ ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೃತರನ್ನು ಪ್ಯಾರಿಸ್ ಗುಪ್ತಾ (7), ಮಂಜು ಪ್ರೇಮ್ ಗುಪ್ತಾ (30), ಅನಿತಾ ಗುಪ್ತಾ (30), ಪ್ರೇಮ್ ಗುಪ್ತಾ (30), ವಿಧಿ ಚೆಂದಿರಮ್ ಗುಪ್ತಾ (15), ನರೇಂದ್ರ ಗುಪ್ತಾ (10) ಮತ್ತು ಗೀತಾದೇವಿ ಧರಮ್‌ದೇವಿ ಗುಪ್ತಾ (60) ಎಂದು ಗುರುತಿಸಲಾಗಿದೆ.

ಅಗ್ನಿ ಅವಘಡ ಹಿಂದಿನ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.