ಜಮ್ಮು (ಪಿಟಿಐ): ‘ಗಡಿ ದಾಟಿ ಭಾರತಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ ಸಂದರ್ಭ ಬಂಧಿಸಲಾಗಿದ್ದ ಮಾನಸಿಕ ಅಸ್ವಸ್ಥ ಬಾಲಕನನ್ನು ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಎಲ್ಒಸಿ ಮೂಲಕ ಪಾಕಿಸ್ತಾನದ ಅಧಿಕಾರಿಗಳಿಗೆ ಶನಿವಾರ ಹಸ್ತಾಂತರಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಇರ್ಷಾದ್ ಅಹ್ಮದ್ ಎಂಬ ಬಾಲಕ ದೇಶಕ್ಕೆ ಪ್ರವೇಶಿಸಲು ಶುಕ್ರವಾರ ಯತ್ನಿಸಿದ್ದ. ಶನಿವಾರ ಮಧ್ಯಾಹ್ನದ ವೇಳೆ ಚಕನ್ ದಾ ಬಾಗ್ ಗಡಿ ಮೂಲಕ ಪಾಕಿಸ್ತಾನ ಸೇನಾಧಿಕಾರಿಗಳಿಗೆ ಬಾಲಕನನ್ನು ಒಪ್ಪಿಸಲಾಗಿದೆ’ ಎಂದರು.
‘ಬಾಲಕನನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸುವ ವೇಳೆ ಪೂಂಛ್ ಮತ್ತು ಪಿಒಕೆಯ ನಾಗರಿಕ ಅಧಿಕಾರಿಗಳು ಸ್ಥಳದಲ್ಲಿದ್ದರು’ ಎಂದೂ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.