ನವದೆಹಲಿ: ರೀಮಲ್ ಚಂಡಮಾರುತ ಪರಿಣಾಮ ಕೇರಳ ಕರಾವಳಿ ಮತ್ತು ಈಶಾನ್ಯ ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ನೈರುತ್ಯ ಮುಂಗಾರು ಗುರುವಾರ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆ ಹವಾಮಾನ ಇಲಾಖೆ ಮೇ 31ರಂದು (ಶುಕ್ರವಾರ) ಮುಂಗಾರು ಪ್ರವೇಶ ಮಾಡಲಿದೆ ಎಂದು ಹೇಳಿತ್ತು.
ರೀಮಲ್ ಪರಿಣಾಮ ಹವಾಮಾನ ಇಲಾಖೆ ಮುನ್ಸೂಚನೆಯ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ ಇಂದಿನಿಂದಲೇ ಕೇರಳ ಕರಾವಳಿ ಮತ್ತು ಈಶಾನ್ಯದ ಕೆಲವು ಭಾಗಗಳಲ್ಲಿ ಮುಂಗಾರು ಪ್ರವೇಶಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಮೂಲಕ ಸಾಗಿದ ರೀಮಲ್ ಚಂಡಮಾರುತ ಮಾನ್ಸೂನ್ ಹರಿವನ್ನು ಬಂಗಾಳ ಕೊಲ್ಲಿಗೆ ಎಳೆದಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿಗಳು ಹೇಳಿದ್ದಾರೆ. ಇದರ ಪರಿಣಾಮ ಈಶಾನ್ಯ ರಾಜ್ಯಗಳಲ್ಲಿ ಮುಂಗಾರು 5 ದಿನ ಮುಂಚಿತವಾಗಿಯೇ ಪ್ರವೇಶ ಪಡೆಯಲಿದೆ ಎಂದು ಅವರು ಹೇಳಿದ್ದಾರೆ.
ಕೇರಳ ಕರಾವಳಿ ಸೇರಿದಂತೆ ಅರುಣಾಚಲ ಪ್ರದೇಶ, ತ್ರಿಪುರಾ, ನಾಗಾಲ್ಯಾಂಡ್, ಮೇಘಾಲಯ, ಮಿಜೋರಾಂ, ಮಣಿಪುರ ಮತ್ತು ಅಸ್ಸಾಂನಲ್ಲಿ ಮಳೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.