ADVERTISEMENT

Wayanad Landslide: ಅನಾಥ ಮಕ್ಕಳಿಗೆ ಎದೆಹಾಲುಣಿಸಲು ಹೊರಟ ಎರಡು ಮಕ್ಕಳ ತಾಯಿ

ಪಿಟಿಐ
Published 1 ಆಗಸ್ಟ್ 2024, 7:45 IST
Last Updated 1 ಆಗಸ್ಟ್ 2024, 7:45 IST
   

ಇಡುಕ್ಕಿ(ಕೇರಳ): ಕೇರಳದಲ್ಲಿ ಭೂಕುಸಿತದಿಂದ ಭಾರಿ ಸಾವು ನೋವು ಮತ್ತು ವಿನಾಶದ ವರದಿಗಳ ನಡುವೆ ನೆರೆಯ ಇಡುಕ್ಕಿ ಜಿಲ್ಲೆಯಿಂದ ಮನಕಲಕುವ ವರದಿಯೊಂದು ಬಂದಿದೆ.

ಇಡುಕ್ಕಿಯ ಎರಡು ಮಕ್ಕಳ ತಾಯಿಯೊಬ್ಬರು ವಯನಾಡು ಭೂಕುಸಿತದಲ್ಲಿ ಪೋಷಕರನ್ನು ಕಳೆದುಕೊಂಡ ಹಸುಗೂಸುಗಳಿಗೆ ಎದೆಹಾಲುಣಿಸಿ, ನಿಸ್ವಾರ್ಥ ಸೇವೆಗೆ ಮುಂದಾಗಿದ್ದಾರೆ.

ಕೇರಳದ ಕೇಂದ್ರ ಭಾಗದ ಇಡುಕ್ಕಿಯಲ್ಲಿರುವ ತಮ್ಮ ನಿವಾಸದಿಂದ ಮಹಿಳೆ ಮತ್ತು ಆಕೆಯ ಪತಿ, 4 ವರ್ಷ ಹಾಗೂ 4 ತಿಂಗಳ ಎರಡು ಮಕ್ಕಳ ಜೊತೆ ವಯನಾಡಿಗೆ ತೆರಳಿದ್ದಾರೆ.

ADVERTISEMENT

ಮಾರ್ಗ ಮಧ್ಯೆ ಮಾಧ್ಯಮಗಳ ಜೊತೆ ಮಾತನಾಡಿರುವ ಆ ಮಹಿಳೆ, ‘ನಾನು ಎರಡು ಮಕ್ಕಳ ತಾಯಿ. ತಾಯಿ ಇಲ್ಲದ ಮಕ್ಕಳ ಪರಿಸ್ಥಿತಿ ಏನು ಎಂಬುದು ನನಗೆ ತಿಳಿದಿದೆ. ಅದರಿಂದಲೇ ನಾನು ಅನಾಥ ಮಕ್ಕಳಿಗೆ ಎದೆಹಾಲುಣಿಸುವ ನಿರ್ಧಾರಕ್ಕೆ ಬಂದಿದ್ದೇನೆ’ ಎಂದು ಹೇಳಿದ್ದಾರೆ.

ಈ ಬಗ್ಗೆ ನನ್ನ ಗಂಡನ ಜೊತೆ ಚರ್ಚಿಸಿದಾಗ ಅವರೂನನ್ನ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಮಕ್ಕಳು, ಪೋಷಕರನ್ನು ಕಳೆದುಕೊಂಡಿರುವ ಬಗ್ಗೆ ಸುದ್ದಿ ಕೇಳಿದ ಕೂಡಲೇ ನೆರವಿಗೆ ಮುಂದಾದೆವು ಎಂದು ಅವರು ತಿಳಿಸಿದ್ದಾರೆ.

ವಯನಾಡು ಜಿಲ್ಲೆಯ ಅತ್ತಮಲ, ಮುಂಡಕ್ಕೈ, ಚೂರಲ್ಮಲ, ನೂಲ್ಪುಳಗಳಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ಭಾರಿ ಕುಸಿತ ಸಂಭವಿಸಿ ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಮಂದಿ ಸಾವಿಗೆ ಕಾರಣವಾಗಿದೆ. ಮಂಗಳವಾರ ಮುಂಜಾನೆ 2ರಿಂದ 4 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ.

ಈ ಭಾಗದಲ್ಲಿ ಜುಲೈ 30ರವರೆಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿತ್ತು. ಎರಡು ದಿನದಲ್ಲಿ 115–204 ಮಿ.ಮೀ ಮಳೆ ಆಗಬಹುದು ಎಂದೂ ಅಂದಾಜಿಸಿತ್ತು. ವಾಸ್ತವವಾ‌ಗಿ 572 ಮಿ.ಮೀ. ಮಳೆ ಸುರಿದಿದೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.