ಚಿಕ್ಕಬಳ್ಳಾಪುರ: ಸಂಸದ ಡಾ.ಕೆ.ಸುಧಾಕರ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ವಿದೇಶಾಂಗ ಸಚಿವರಾದ ಎಸ್.ಜೈಶಂಕರ್ ಹಾಗೂ ವಿದೇಶಾಂಗ ಖಾತೆ ರಾಜ್ಯ ಸಚಿವರಾದ ಕೀರ್ತಿವರ್ಧನ್ ಸಿಂಗ್, ಪವಿತ್ರಾ ಮಾರ್ಗರೀಟಾ ಅವರ ನೇತೃತ್ವದ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ 10 ಹಾಗೂ ರಾಜ್ಯಸಭೆಯ 9 ಸದಸ್ಯರು, ರಾಜ್ಯಸಭೆಯಿಂದ ಒಬ್ಬರು ವಿಶೇಷ ಆಹ್ವಾನಿತ ಸದಸ್ಯರು ಮತ್ತು ಇಬ್ಬರು ಮಾಜಿ ಅಧಿಕಾರಿಗಳು ಸದಸ್ಯರಾಗಿದ್ದಾರೆ. ಈ ಸಲಹಾ ಸಮಿತಿಯು ಸರ್ಕಾರದ ವಿದೇಶಾಂಗ ನೀತಿ, ವಿವಿಧ ಯೋಜನೆ, ಕಾರ್ಯಕ್ರಮ ಅನುಷ್ಠಾನದ ವಿಧಾನ ಹಾಗೂ ದೇಶದ ವಿದೇಶಾಂಗಕ್ಕೆ ಸಂಬಂಧಿಸಿದ ವಿಚಾರ ಕುರಿತು ಪರಾಮರ್ಶೆ ನಡೆಸಲಿದ್ದು, ಸೂಕ್ತ ಸಲಹೆ, ಸೂಚನೆ ನೀಡಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.