ADVERTISEMENT

ಭಯೋತ್ಪಾದನೆ: ತಮಿಳುನಾಡಿನ 11 ಕಡೆಗಳಲ್ಲಿ ಎನ್‌ಐಎ ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಸೆಪ್ಟೆಂಬರ್ 2024, 5:48 IST
Last Updated 24 ಸೆಪ್ಟೆಂಬರ್ 2024, 5:48 IST
<div class="paragraphs"><p>ಎನ್‌ಐಎ</p></div>

ಎನ್‌ಐಎ

   

(ಪಿಟಿಐ ಸಂಗ್ರಹ ಚಿತ್ರ)

ಚೆನ್ನೈ: ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 11 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಇಂದು (ಮಂಗಳವಾರ) ದಾಳಿ ನಡೆಸಿದ್ದಾರೆ.

ADVERTISEMENT

'ಹಿಜ್ಬ್ ಉತ್ ತಹ್ರೀರ್' ಅಂತರರಾಷ್ಟ್ರೀಯ ಇಸ್ಲಾಮಿಕ್ ಸಂಘಟನೆಗೆ ನಂಟು ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.

ಜೂನ್ ತಿಂಗಳಲ್ಲಿ ಇದೇ ಸಂಘಟನೆಯ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಎನ್‌ಐಎ ಬಂಧಿಸಿತ್ತು.

ದೇಶ ವಿರೋಧಿ ಚಟುವಟಿಕೆ, ಭಯೋತ್ಪಾದನೆ ಸಂಚು ಹಾಗೂ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ಕೈಗೊಂಡಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.