ADVERTISEMENT

ಪುರಿ ಜಗನ್ನಾಥ ದೇವಾಲಯ: ₹ 800 ಕೋಟಿ ಮೊತ್ತದ ಯೋಜನೆಗಳ ಉದ್ಘಾಟನೆ

ಪಿಟಿಐ
Published 17 ಜನವರಿ 2024, 14:26 IST
Last Updated 17 ಜನವರಿ 2024, 14:26 IST

ಪುರಿ: ಒಡಿಶಾದ ಪುರಿ ಜಗನ್ನಾಥ ದೇವಾಲಯದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ₹ 800 ಕೋಟಿ ರೂಪಾಯಿ ವೆಚ್ಚದ ಪಾರಂಪರಿಕ ಕಾರಿಡಾರ್ ಯೋಜನೆಯನ್ನು  ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಬುಧವಾರ ಉದ್ಘಾಟಿಸಿದರು.

ಉದ್ಘಾಟನೆ ಬಳಿಕ ಮಾತನಾಡಿದ ಅವರು ಭಗವಾನ್ ಜಗನ್ನಾಥನ ಆಶೀರ್ವಾದದಿಂದ ಈ ಯೋಜನೆ ಸಾಧ್ಯವಾಗಿದೆ ಎಂದು ಹೇಳಿದರು.

ಈ ಯೋಜನೆಯಲ್ಲಿ ಪಾರ್ಕಿಂಗ್ ಪ್ರದೇಶಗಳು, ಸೇತುವೆಗಳು, ರಸ್ತೆಗಳು, ಯಾತ್ರಾ ಕೇಂದ್ರಗಳು, ವಿಶ್ರಾಂತಿ ಕೊಠಡಿಗಳು, ಶೌಚಾಲಯಗಳು ಸೇರಿದಂತೆ ಭಕ್ತರಿಗೆ ಇತರ ಸೌಲಭ್ಯಗಳು ಒಳಗೊಂಡಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.