ADVERTISEMENT

ಸರ್ಕಾರಿ ನೌಕರರ ವಿರುದ್ಧ ಪ್ರಕರಣ ದಾಖಲಿಗೆ ಇಲಾಖೆ ಅನುಮತಿ ಕಡ್ಡಾಯ: ಸುಪ್ರೀಂ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2023, 23:38 IST
Last Updated 13 ಆಗಸ್ಟ್ 2023, 23:38 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಸುಪ್ರೀಂ ಕೋರ್ಟ್‌ ಎಂದು ಹೇಳಿದೆ.

ನೌಕರ ಎಸಗಿದ ಕೃತ್ಯದ ಬಗ್ಗೆ ಪ್ರಕರಣ ದಾಖಲಿಸಲು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಸೆಕ್ಷನ್‌ 19ರ ಅಡಿ ಇಲಾಖೆಯ ಅನುಮತಿ ಪಡೆಯಬೇಕಿದೆ. ಆದರೆ, ನೌಕರನ ವಿರುದ್ಧ ಐಪಿಸಿ ಸೆಕ್ಷನ್‌ನಡಿ ದಾಖಲಾಗುವ ಪ್ರಕರಣಗಳಲ್ಲಿ ಈ ಮಾನದಂಡ ಪಾಲಿಸುವ ಅಗತ್ಯವಿಲ್ಲ ಎಂದು ಬಿ.ಆರ್‌. ಗವಾಯಿ ಮತ್ತು ಜೆ.ಬಿ. ಪಾರ್ದಿವಾಲಾ ಅವರಿದ್ದ ನ್ಯಾಯಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT