ADVERTISEMENT

ಸತ್ಯಮೇವ ಜಯತೇ: ಕೇಜ್ರಿವಾಲ್‌ಗೆ ಜಾಮೀನು ಲಭಿಸಿದ್ದಕ್ಕೆ ಎಎಪಿ ಹರ್ಷ

ಪಿಟಿಐ
Published 12 ಜುಲೈ 2024, 6:19 IST
Last Updated 12 ಜುಲೈ 2024, 6:19 IST
<div class="paragraphs"><p>ಎಎಪಿ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ಚಿತ್ರ</p></div>

ಎಎಪಿ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ಚಿತ್ರ

   

– ಎಕ್ಸ್ ಚಿತ್ರ (@AamAadmiParty)

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಆಮ್‌ ಆದ್ಮಿ ಪಕ್ಷವು ಹರ್ಷ ವ್ಯಕ್ತಪಡಿಸಿದೆ.

ADVERTISEMENT

ಅರವಿಂದ ಕೇಜ್ರಿವಾಲ್ ಅವರು ತ್ರಿವರ್ಣ ಧ್ವಜ ಹಿಡಿದಿರುವ ಚಿತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪಕ್ಷವು, ‘ಸತ್ಯಮೇವ ಜಯತೇ’ ಎಂದು ‌ಬರೆದುಕೊಂಡಿದೆ.

ಅಬಕಾರಿ ನೀತಿ ಹಗರಣದಲ್ಲಿ ಇ.ಡಿ ದಾಖಲಿಸಿಕೊಂಡ ಪ್ರಕರಣಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ಲಭಿಸಿದರೂ, ಜೈಲಿನಿಂದ ಹೊರಬರುವಂತಿಲ್ಲ. ಇದೇ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರನ್ನು ಸಿಬಿಐ ಬಂಧಿಸಿದೆ.

ಇದೇ ವರ್ಷ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.