ADVERTISEMENT

ರಸ್ತೆ ಅಪಘಾತ: ನಾಲ್ವರು ಕಾರ್ಮಿಕರ ಸಾವು

ಪಿಟಿಐ
Published 2 ಏಪ್ರಿಲ್ 2024, 15:52 IST
Last Updated 2 ಏಪ್ರಿಲ್ 2024, 15:52 IST
   

ಮುಂಬೈ: ಕೂಲಿ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಟ್ರಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟು, ಇತರ 10 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕವಠೆ ಮಹಾಂಕಾಲ್‌ ಪಟ್ಟಣ ಬಳಿಯ ಮೀರಾಜ್‌– ಪಂಡರಪುರ ರಸ್ತೆಯಲ್ಲಿ ಈ ದುರಂತ ನಡೆದಿದೆ. ಕಬ್ಬು ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್‌ನ ಇಂಜಿನ್‌ಗೆ ಹಾನಿಯಾಗಿದ್ದ ಕಾರಣ ಅದನ್ನು ಸರಿಪಡಿಸಲು ರಸ್ತೆ ಬದಿ ನಿಲ್ಲಿಸಲಾಗಿತ್ತು. ಆ ವೇಳೆ ವೇಗವಾದ ಬಂದ ಟ್ರಕ್‌, ಟ್ರ್ಯಾಕ್ಟರ್‌ನ ಟ್ರಾಲಿಗೆ ಅಪ್ಪಳಿಸಿದ ಪರಿಣಾಮ ಸಾವು–ನೋವು ಸಂಭವಿಸಿದೆ.

ಗಾಯಾಳುಗಳನ್ನು ಮಿರಾಜ್‌ ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಕವಟೆ ಮಹಾಂಕಾಲ್‌ನ ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.