ADVERTISEMENT

ಇಂದಿರಾ ಗಾಂಧಿ ‘ಭಾರತ ಮಾತೆ’ ಹೇಳಿಕೆ: ಸುರೇಶ್ ಗೋಪಿ ನೀಡಿದ ಸ್ಪಷ್ಟನೆ ಹೀಗಿದೆ

ಪಿಟಿಐ
Published 16 ಜೂನ್ 2024, 10:09 IST
Last Updated 16 ಜೂನ್ 2024, 10:09 IST
<div class="paragraphs"><p>ಸುರೇಶ್ ಗೋಪಿ ಮತ್ತು ಇಂದಿರಾ ಗಾಂಧಿ</p></div>

ಸುರೇಶ್ ಗೋಪಿ ಮತ್ತು ಇಂದಿರಾ ಗಾಂಧಿ

   

ತಿರುವನಂತಪುರ(ಕೇರಳ): ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ‘ಕಾಂಗ್ರೆಸ್ ಪಕ್ಷದ ತಾಯಿ’ ಎಂದ ನನ್ನ ಹೇಳಿಕೆಯನ್ನು ಮಾಧ್ಯಮಗಳು, ‘ಭಾರತ ಮಾತೆ’ ಎಂದು ಹೇಳಿದ್ದಾಗಿ ತಪ್ಪಾಗಿ ಅರ್ಥೈಸಿವೆ ಎಂದು ಕೇಂದ್ರ ಸಚಿವ, ಬಿಜೆಪಿ ಮುಖಂಡ ಸುರೇಶ್ ಗೋಪಿ ಹೇಳಿದರು.

ಈ ಕುರಿತಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ‘ಭಾಷೆಯ ಸಂದರ್ಭೋಚಿತ ಅರ್ಥವನ್ನು ಗ್ರಹಿಸಲು ಸಾಧ್ಯವಿಲ್ಲವೇ ಎಂದು ಸುದ್ದಿಗಾರರನ್ನೇ ಪ್ರಶ್ನಿಸಿದರು.

ADVERTISEMENT

‘ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ತಂದೆ ಕೆ. ಕರುಣಾಕರನ್, ದೇಶದಲ್ಲಿ ಇಂದಿರಾ ಗಾಂಧಿ ಎಂದು ನಾನು ಆಗ ಹೇಳಿದ್ದೆ. ನಾನೇನು ಹೇಳಿದ್ದೇನೋ ಅದನ್ನು ಹೃದಯದಿಂದ ಹೇಳಿದ್ದೇನೆ’ ಎಂದರು.

ಶನಿವಾರ ತ್ರಿಶೂರ್‌ನಲ್ಲಿರುವ ಕೆ. ಕರುಣಾಕರನ್‌ ಅವರ ಸ್ಮಾರಕಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸುರೇಶ್ ಗೋಪಿ, ‘ಇಂದಿರಾ ಅವರನ್ನು ‘ಭಾರತದ ಮಾತೆ’ಯಾಗಿ ಪರಿಗಣಿಸುವಂತೆಯೇ, ಕರುಣಾಕರನ್‌ ಅವರನ್ನು ಕೇರಳದಲ್ಲಿ ‘ಕಾಂಗ್ರೆಸ್‌ನ ತಂದೆ’ ಎಂಬುದಾಗಿ ಪರಿಗಣಿಸುತ್ತೇನೆ’ ಎಂದು ಹೇಳಿದ್ದರು.

ಕರುಣಾಕರನ್‌ ಮೇಲೆ ಇರುವ ಗೌರವದಿಂದಾಗಿ ಸ್ಮಾರಕಕ್ಕೆ ಭೇಟಿ ನೀಡಿರುವುದಾಗಿಯೂ ತಿಳಿಸಿದ್ದರು.

ಸುರೇಶ್ ಗೋಪಿ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಸದ್ದು ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.