ADVERTISEMENT

ತೆಲಂಗಾಣದ ಜನರು ರಾಹುಲ್‌ ಗಾಂಧಿಗೆ ತಕ್ಕ ಉತ್ತರ ನೀಡಲಿದ್ದಾರೆ: ಸಚಿವ ಅಮಿತ್‌ ಶಾ

ಪಿಟಿಐ
Published 25 ನವೆಂಬರ್ 2023, 9:44 IST
Last Updated 25 ನವೆಂಬರ್ 2023, 9:44 IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ   ಪಿಟಿಐ ಚಿತ್ರಗಳು

ಹೈದರಾಬಾದ್: ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಅಪಶಕುನ‘ ಎಂದು ಕರೆದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ ಮುಂಬರುವ ಚುನಾವಣೆಗಳಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ‘ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೋದಿ ಕುರಿತು ಅಸಂಬದ್ಧ ಪದಗಳ ಬಳಕೆ ಮಾಡುತ್ತಿರುವ ರಾಹುಲ್‌ ಗಾಂಧಿಗೆ ತೆಲಂಗಾಣದ ಜನರು ವೋಟುಗಳ ಮೂಲಕವೇ ಉತ್ತರಿಸಲಿದ್ದಾರೆ ಎಂದರು.

ನವೆಂಬರ್‌19ರಂದು ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ಏಕದಿನ ವಿಶ್ವಕಪ್‌ ಫೈನಲ್ ಪಂದ್ಯಾವಾಳಿ ನಡೆದಿತ್ತು. ಈ ಪಂದ್ಯ ವೀಕ್ಷಿಸಲು ಪ್ರಧಾನಿ ತೆರಳಿದ್ದರು. ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲನುಭವಿಸಿತ್ತು. ಈ ಸೋಲಿಗೆ ಮೋದಿ ಪಂದ್ಯ ವೀಕ್ಷಿಸಲು ತೆರಳಿದ್ದೆ ಕಾರಣ ಎಂದು ರಾಹುಲ್‌ ವ್ಯಂಗ್ಯವಾಡಿದ್ದರು.

ADVERTISEMENT

ಪಿಎಂ ಎಂದರೆ 'ಪನೌತಿ ಮೋದಿ' ಎಂದು ರಾಹುಲ್‌ ಗಾಂಧಿ ಹೇಳಿದ್ದರು. ಹಿಂದಿಯ ಪನೌತಿ ಎಂಬ ಪದಕ್ಕೆ ಕನ್ನಡದಲ್ಲಿ ಅಪಶಕುನ ಎಂಬರ್ಥವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.