ADVERTISEMENT

ತೆಲಂಗಾಣದ ಮೂವರು ಪೊಲೀಸ್‌ ಅಧಿಕಾರಿಗಳ ಅಮಾನತಿಗೆ ಆದೇಶ

ಪಿಟಿಐ
Published 29 ನವೆಂಬರ್ 2023, 16:24 IST
Last Updated 29 ನವೆಂಬರ್ 2023, 16:24 IST
Venugopala K.
   Venugopala K.

ನವದೆಹಲಿ: ಚುನಾವಣೆ ಹಿನ್ನೆಲೆಯಲ್ಲಿ ನಗದು ವಶಕ್ಕೆ ತೆಗೆದುಕೊಂಡಿದ್ದ ಪ್ರಕರಣವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ ಆರೋಪದ ಮೇಲೆ ತೆಲಂಗಾಣದ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಪಡಿಸಲು ಚುನವಣಾ ಆಯೋಗವು ಬುಧವಾರ ಆದೇಶ ಹೊರಡಿಸಿದೆ.

ಉಪ ಪೊಲೀಸ್‌ ಆಯುಕ್ತರ ಹೆಸರೂ ಈ ಪಟ್ಟಿಯಲ್ಲಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಆಯೋಗ ಪತ್ರ ಬರೆದಿದೆ. ₹18 ಲಕ್ಷ ನಗದು, ಒಂದು ಮೊಬೈಲ್‌ ಫೋನ್‌ ಮತ್ತು ಚೆಕ್‌ ಬುಕ್‌ಗಳನ್ನು ವಶಪಡಿಸಿಕೊಂಡ ಬಳಿಕ ಅಧಿಕಾರಿಗಳು, ಕಾನೂನು ಕ್ರಮಗಳನ್ನು ಕೈಗೊಳ್ಳುವ ಬದಲು ಪ್ರಕರಣವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಆಯೋಗಕ್ಕೆ ತಿಳಿದುಬಂದಿದೆ. ಅವರು ತನಿಖೆಯ ದಿಕ್ಕುತಪ್ಪಿಸಲು ಪ್ರಯತ್ನಿಸಿದ್ದರು ಎಂದೂ ಹೇಳಲಾಗಿದೆ ಎಂದು ಪತ್ರದಲ್ಲಿ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.