ADVERTISEMENT

ಛತ್ತೀಸ್‌ಗಢ | ಎನ್‌ಕೌಂಟರ್‌: ಮೂವರು ನಕ್ಸಲರ ಸಾವು

ಪಿಟಿಐ
Published 23 ಸೆಪ್ಟೆಂಬರ್ 2024, 15:22 IST
Last Updated 23 ಸೆಪ್ಟೆಂಬರ್ 2024, 15:22 IST
...
...   

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜತೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ.

ಛತ್ತೀಸ್‌ಗಢ–ಮಹಾರಾಷ್ಟ್ರ ಗಡಿಯ ಅಭುಜ್‌ಮಾದ್‌ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುವಾಗ ಸೋಮವಾರ ಸಾಯಂಕಾಲ ಸುಮಾರು 4ಗಂಟೆಗೆ ಗುಂಡಿನ ಚಕಮಕಿ ನಡೆದಿದೆ.

ಘಟನಾ ಸ್ತಳದಲ್ಲಿ ಎಕೆ–47 ರೈಫಲ್‌ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.