ADVERTISEMENT

ತಮಿಳುನಾಡು: ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

​ಪ್ರಜಾವಾಣಿ ವಾರ್ತೆ
Published 10 ಮೇ 2023, 16:25 IST
Last Updated 10 ಮೇ 2023, 16:25 IST
ಅಣ್ಣಾಮಲೈ
ಅಣ್ಣಾಮಲೈ    

ಚೆನ್ನೈ (ಪಿಟಿಐ): ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಆರೋಪದ ಮೇಲೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ರಾಜ್ಯ ಸರ್ಕಾರವು ಬುಧವಾರ ಮಾನನಷ್ಟ ಮೊಕದ್ದಮೆ ಹೂಡಿದೆ.

ಸರ್ಕಾರಿ ವಕೀಲ ಜಿ.ದೇವರಾಜನ್‌ ಅವರು ಅಣ್ಣಾಮಲೈ ಮಾಡಿರುವ ಎರಡು ಆರೋಪಗಳಿಗೆ ಸಂಬಂಧಿಸಿದಂತೆ ರಜಾ ಅವಧಿಯ ಸೆಷನ್ಸ್‌ ನ್ಯಾಯಾಧೀಶೆ ಸಿ. ಉಮಾ ಮಹೇಶ್ವರಿ ಅವರ ಪೀಠದೆದುರು ಮೊಕದ್ದಮೆ ದಾಖಲಿಸಿದ್ದಾರೆ.

ಸ್ಟಾಲಿನ್‌ ಅವರು ಹೂಡಿಕೆದಾರ ಸಂಸ್ಥೆ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದರು ಮತ್ತು ₹200 ಕೋಟಿ ಲಂಚ ಪಡೆದಿದ್ದರು ಎಂದು ಅಣ್ಣಾಮಲೈ ಅವರು ಕಳೆದ ಏಪ್ರಿಲ್‌ನಲ್ಲಿ ಸುದ್ದಿಗೋಷ್ಠಿಯೊಂದರಲ್ಲಿ ಆರೋಪಿಸಿದ್ದರು.

ADVERTISEMENT

ಸ್ಟಾಲಿನ್‌ರ ಹೆಸರಿಗೆ ಚ್ಯುತಿ ತರುವ ಉದ್ದೇಶದಿಂದಲೇ ಈ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ಡಿಎಂಕೆ ಆರೋಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.