ADVERTISEMENT

ನಿರುದ್ಯೋಗ ಮೋದಿ ಸರ್ಕಾರಕ್ಕಿರುವ ದೊಡ್ಡ ಶಾಪ: ಖರ್ಗೆ ವಾಗ್ದಾಳಿ

ಪಿಟಿಐ
Published 14 ಆಗಸ್ಟ್ 2024, 11:36 IST
Last Updated 14 ಆಗಸ್ಟ್ 2024, 11:36 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ನವದೆಹಲಿ: ‘ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮೋದಿ ಸರ್ಕಾರವು ತನ್ನ ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ವಿಪರ್ಯಾಸ’ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡ ಅವರು, ‘ಇರುವ ಕೆಲವೇ ಕೆಲವು ಉದ್ಯೋಗಗಳಿಗಾಗಿ ಲಕ್ಷಗಟ್ಟಲೆ ಜನರು ಬೀದಿಗಿಳಿದು ಕಷ್ಟಪಡುತ್ತಿದ್ದಾರೆ ಎನ್ನುವ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ. ಮುಂಬೈ ಪೊಲೀಸ್‌ ಇಲಾಖೆಯಲ್ಲಿದ್ದ 1,257 ಮಹಿಳಾ ಕಾನ್‌ಸ್ಟೆಬಲ್ ಹಾಗೂ ಮಹಿಳಾ ಕಾನ್‌ಸ್ಟೆಬಲ್‌ (ಚಾಲಕ) ಹುದ್ದೆಗಳಿಗೆ 1.11 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ನಿರುದ್ಯೋಗ ಮೋದಿ ಸರ್ಕಾರಕ್ಕಿರುವ ದೊಡ್ಡ ಶಾಪ’ ಎಂದು ಖರ್ಗೆ ಹೇಳಿದ್ದಾರೆ. 

ADVERTISEMENT

‘ಆತ್ಮಹತ್ಯೆ ತಡೆಗಾಗಿ ಗುಜರಾತ್‌ ವಜ್ರ ಕಾರ್ಮಿಕರ ಒಕ್ಕೂಟ ಜುಲೈ 15ರಂದು ಸಹಾಯವಾಣಿಯೊಂದನ್ನು ಆರಂಭಿಸಿತು. ಇದಕ್ಕೆ ಉದ್ಯೋಗ ಕಳೆದುಕೊಂಡು ಹತಾಶರಾದ 1600ಕ್ಕೂ ಹೆಚ್ಚು ಜನ ಕರೆ ಮಾಡಿದ್ದರು. ಸೂರತ್‌ನಲ್ಲಿ ವಜ್ರ ತಯಾರಿಕಾ ಘಟಕ ತನ್ನ 50 ಸಾವಿರ ಉದ್ಯೋಗಿಗಳಿಗೆ 10 ದಿನ ರಜೆ ನೀಡಿ ಮನೆಗೆ ಕಳುಹಿಸಿದೆ. ಈಗ ಆರ್ಥಿಕ ಹಿಂಜರಿಕೆಯನ್ನು ಅನುಭವಿಸುತ್ತಿದೆ’ ಎಂದರು. 

ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಹುಸಿ ಭರವಸೆಯಿಂದ ಬಿಜೆಪಿಯು ಪ್ರತಿಯೊಬ್ಬ ಭಾರತೀಯನಿಗೆ ದ್ರೋಹ ಬಗೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.