ADVERTISEMENT

ಬುಲಂದ್‌ಶಹರ್‌ | CBI ದಾಳಿ ಬೆನ್ನಲ್ಲೇ ಗುಂಡು ಹಾರಿಸಿಕೊಂಡು ಅಧಿಕಾರಿ ಆತ್ಮಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಆಗಸ್ಟ್ 2024, 10:09 IST
Last Updated 21 ಆಗಸ್ಟ್ 2024, 10:09 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಬುಲಂದ್‌ಶಹರ್‌: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಒಳಗಾಗಿದ್ದ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಅಂಚೆ ಕಚೇರಿಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೃತ ಅಧಿಕಾರಿಯನ್ನು ಬುಲಂದ್‌ಶಹರ್‌ ಅಂಚೆ ಕಚೇರಿಯ ಸೂಪರಿಂಟೆಂಡೆಂಟ್ ಟಿ.ಪಿ. ಸಿಂಗ್ ಎಂದು ಗುರುತಿಸಲಾಗಿದೆ. ಸಿಂಗ್ ಇಂದು ಬೆಳಗ್ಗೆ ಅಲಿಘರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರ ಅಂಚೆ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದೇ ವೇಳೆ ಟಿ.ಪಿ. ಸಿಂಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು. ಸಿಬಿಐ ತನಿಖೆಯಿಂದ ಸಿಂಗ್ ಅಸಮಾಧಾನಗೊಂಡಿದ್ದರು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.