ADVERTISEMENT

ಉದಯಪುರದಲ್ಲಿ ಚಿರತೆ ದಾಳಿ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಪಿಟಿಐ
Published 1 ಅಕ್ಟೋಬರ್ 2024, 10:20 IST
Last Updated 1 ಅಕ್ಟೋಬರ್ 2024, 10:20 IST
   

ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಚಿರತೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಉದಯಪುರದಲ್ಲಿ ಚಿರತೆ ದಾಳಿಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು 55 ವರ್ಷದ ಕಮಲಾ ಕನ್ವರ್ ಎಂದು ಗುರುತಿಸಲಾಗಿದೆ.

ADVERTISEMENT

ಮಹಿಳೆಯು ತನ್ನ ಮನೆಯ ಬಳಿ ಜಾನುವಾರುಗಳಿಗೆ ಮೇವು ಹಾಕುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಆಕೆಯ ಕೂಗು ಕೇಳಿದ ಕುಟುಂಬಸ್ಥರು ಆಕೆಯನ್ನು ರಕ್ಷಿಸಲು ಧಾವಿಸಿದಾದರೂ ಅಷ್ಟರ ವೇಳೆಗೆ ಆಕೆ ಮೃತಪಟ್ಟಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ಅರಣ್ಯ ಇಲಾಖೆ, ಪೊಲೀಸ್ ಮತ್ತು ಸೇನಾ ತಂಡಗಳು ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.