ADVERTISEMENT

ಕೇರಳ | ಕಾರ್ಖಾನೆಯಲ್ಲಿ ಸ್ಫೋಟ; ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

ಪಿಟಿಐ
Published 6 ಅಕ್ಟೋಬರ್ 2024, 7:42 IST
Last Updated 6 ಅಕ್ಟೋಬರ್ 2024, 7:42 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಕೊಚ್ಚಿ: ಕೇರಳದ ಎರ್ನಾಕುಲಂ ಜಿಲ್ಲೆಯ ಪ್ರಾಣಿಗಳ ಕೊಬ್ಬು ಸಂಸ್ಕರಣಾ‍ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೃತರನ್ನು ಒಡಿಶಾ ಮೂಲದ ಅಜಯ್‌ ಎಂದು ಗುರುತಿಸಲಾಗಿದೆ.

ADVERTISEMENT

ಪ್ರಾಥಮಿಕ ಮಾಹಿತಿ ಪ್ರಕಾರ, ಗ್ಯಾಸ್‌ ಸಿಲಿಂಡರ್‌ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಆದರೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.