ADVERTISEMENT

ಖರ್ಗೆ, ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ವೈ.ಎಸ್‌ ಶರ್ಮಿಳಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜನವರಿ 2024, 6:10 IST
Last Updated 4 ಜನವರಿ 2024, 6:10 IST
<div class="paragraphs"><p>ರಾಹುಲ್ ಗಾಂಧಿ ಅವರಿಗೆ ಹೂಗುಚ್ಛ ನೀಡಿದ ಶರ್ಮಿಳಾ</p></div>

ರಾಹುಲ್ ಗಾಂಧಿ ಅವರಿಗೆ ಹೂಗುಚ್ಛ ನೀಡಿದ ಶರ್ಮಿಳಾ

   

ಎಕ್ಸ್ ಚಿತ್ರ: @INCIndia

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್‌ಮೋಹನ್‌ ರೆಡ್ಡಿ ಅವರ ಸಹೋದರಿ ವೈ.ಎಸ್ ಶರ್ಮಿಳಾ ಅವರು ಇಂದು (ಜ. 4) ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಹಾಗೂ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಇಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ADVERTISEMENT

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, ‘ವೈಎಸ್‌ಆರ್ ತೆಲಂಗಾಣ ಪಕ್ಷನ್ನು ಕಾಂಗ್ರೆಸ್‌ ಪಕ್ಷದೊಂದಿಗೆ ವಿಲೀನಗೊಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ವೈಎಸ್ಆರ್ ತೆಲಂಗಾಣ ಪಕ್ಷವು ಇಂದಿನಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಭಾಗವಾಗುತ್ತಿರುವುದು ನನಗೆ ಸಂತೋಷ ಉಂಟು ಮಾಡಿದೆ’ ಎಂದು ಹೇಳಿದರು.

ವೈ.ಎಸ್ ಶರ್ಮಿಳಾ ಅವರು ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌ ರಾಜಶೇಖರ ರೆಡ್ಡಿ ಅವರ ಪುತ್ರಿ ಹಾಗೂ ಆಂಧ್ರಪ್ರದೇಶದ ಈಗಿನ ಮುಖ್ಯಮಂತ್ರಿ ವೈ.ಎಸ್ ಜಗನ್‌ ಮೋಹನ್‌ ರೆಡ್ಡಿ ಅವರ ಕಿರಿಯ ಸಹೋದರಿ.

ಇತ್ತೀಚೆಗೆ ನಡೆದ ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶರ್ಮಿಳಾ ಬೆಂಬಲ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.