ADVERTISEMENT

ಎಂಜಿನಿಯರಿಂಗ್‌: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2015, 19:37 IST
Last Updated 13 ಆಗಸ್ಟ್ 2015, 19:37 IST

ಬೆಂಗಳೂರು: ವಿಜ್ಞಾನ ಪದವೀಧರರಿಗೆ (ಬಿಎಸ್‌ಸಿ) ಎಂಜಿನಿಯರಿಂಗ್‌ ಕೋರ್ಸ್‌ಗಳ 2ನೇ ವರ್ಷಕ್ಕೆ (ಮೂರನೇ ಸೆಮಿಸ್ಟರ್‌)  ನೇರ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ.

ಪದವಿಯಲ್ಲಿ ಕನಿಷ್ಠ ಶೇ 45ರಷ್ಟು ಅಂಕಗಳಿಸಿರುವ (ಮೀಸಲಾತಿ ಅಭ್ಯರ್ಥಿಗಳಿಗೆ ಈ ಮಿತಿ ಶೇ 40), ದ್ವಿತೀಯ ಪಿಯುಸಿಯಲ್ಲಿ ಗಣಿತವನ್ನು ಒಂದು ವಿಷಯನ್ನಾಗಿ ಅಧ್ಯಯನ ನಡೆಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಕೆಗೆ ಆಗಸ್ಟ್‌ 22 ಕೊನೆಯ ದಿನ. ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್‌ (http://kea.kar.nic.in/) ಭೇಟಿ ನೀಡಬಹುದು.

ತಿದ್ದುಪಡಿಗೆ ಅವಕಾಶ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ, ಅರ್ಜಿಯಲ್ಲಿ ನಮೂದಿಸಿರುವ ವರ್ಗ, ಪ್ರವರ್ಗಗಳನ್ನು ತಿದ್ದುಪಡಿ ಮಾಡಲು ಅವಕಾಶವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.