ADVERTISEMENT

ಜಯರಾಮ ಶೆಟ್ಟಿ ನಿಧನ

​ಪ್ರಜಾವಾಣಿ ವಾರ್ತೆ
Published 15 ಮೇ 2014, 19:30 IST
Last Updated 15 ಮೇ 2014, 19:30 IST

ಕುಂದಾಪುರ: ಉಡುಪಿ  ಮಾಜಿ ಸಂಸದ ಐ.ಎಂ.­ಜಯರಾಮ ಶೆಟ್ಟಿ (64) ಗುರುವಾರ ಬೆಂಗಳೂರಿನಲ್ಲಿ ದೀರ್ಘ ಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ.

1994ರಲ್ಲಿ ಬಿಜೆಪಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರ­ದಿಂದ ಆಯ್ಕೆಯಾಗಿದ್ದ ಅವರು, 1998ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಆಸ್ಕರ್‌ ಫರ್ನಾಂಡಿಸ್ ಅವರನ್ನು ಸೋಲಿಸಿ ಸಂಸತ್ತಿಗೆ ಆಯ್ಕೆಯಾಗಿದ್ದರು.

ಆದರೆ 1999ರ ಲೋಕಸಭಾ ಚುನಾವಣೆಯಲ್ಲಿ  ಕಾಂಗ್ರೆಸ್‌ನ ವಿನಯಕುಮಾರ್‌ ಸೊರಕೆ ವಿರುದ್ಧ ಸೋತಿದ್ದರು. ಬಳಿಕ ಬಿಜೆಪಿ ತೊರೆದು ಸಮತಾ ಪಕ್ಷ ಸೇರಿದ್ದರು. ಈಚೆಗೆ ಕಾಂಗ್ರೆಸ್‌ ಸೇರಿದ್ದರು. ಕುಂದಾಪುರದ ಮೂಡ್ಲುಕಟ್ಟೆ­ಯಲ್ಲಿ ಎಂಜಿನಿ­ಯರಿಂಗ್‌ ಕಾಲೇಜು ಸ್ಥಾಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.