ADVERTISEMENT

ವಸಂತ ನಾಡಿಗೇರಗೆ ಖಾದ್ರಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 2 ಮೇ 2014, 19:30 IST
Last Updated 2 ಮೇ 2014, 19:30 IST
ವಸಂತ್‌ ನಾಡಿಗೇರ
ವಸಂತ್‌ ನಾಡಿಗೇರ   

ಬೆಂಗಳೂರು: ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್‌ ವತಿಯಿಂದ ನೀಡ­ಲಾಗುವ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ಗೆ ‘ವಿಜಯ ಕರ್ನಾಟಕ’ ಪತ್ರಿಕೆಯ ಸುದ್ದಿ ಸಂಪಾ­ದಕ  ವಸಂತ ನಾಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ಫಲಕ, ಅಭಿನಂದನಾ ಪತ್ರ ಹಾಗೂ ₨ 15 ಸಾವಿರ ನಗದನ್ನು ಒಳಗೊಂಡಿದೆ. ಜೂನ್‌ 6ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುವ ಖಾದ್ರಿ ಶಾಮಣ್ಣ ಜನ್ಮದಿನದ ಸಮಾರಂಭ­ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾ­ಗು­ವುದು ಎಂದು ಟ್ರಸ್ಟ್‌ನ ಕಾರ್ಯ­ದರ್ಶಿ ಖಾದ್ರಿ ಎಸ್‌.ಅಚ್ಯುತನ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.