ಬೆಂಗಳೂರು: ಸರ್ಕಾರಕ್ಕೆ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್ಟಿ) ಪಾವತಿಸದಿದ್ದರೂ ಪಾವತಿಸಿದ ತೆರಿಗೆ ಹಿಂಪಡೆಯುವ ಸೌಲಭ್ಯ ಬಳಸಿಕೊಂಡು ನಕಲಿ ಬಿಲ್ಗಳ ಮೂಲಕ ₹180 ಕೋಟಿ ವಂಚಿಸಿದ್ದ ಪ್ರಕರಣವನ್ನು ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ವಂಚನೆ ಪ್ರಕರಣದ ಪ್ರಮುಖ ಸೂತ್ರಧಾರಿ ಕೇರಳದ ಮೊಹಮ್ಮದ್ ಸಿದ್ದಿಕ್ ಅವರನ್ನು ಬಂಧಿಸಲಾಗಿದೆ.
ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ 100ಕ್ಕೂ ಹೆಚ್ಚು ಜಿಎಸ್ಟಿ ಬೋಗಸ್ ನೋಂದಣಿ ಪ್ರಕರಣಗಳು ಪತ್ತೆಯಾಗಿದ್ದು, ₹1,008 ಕೋಟಿ ಮೊತ್ತದ ನಕಲಿ ಬಿಲ್ಗಳನ್ನು ಸೃಷ್ಟಿಸಿ, ಹಲವರ ಖಾತೆಗಳಿಗೆ ಮರಳಿ ಜಮೆ ಮಾಡಲಾಗಿತ್ತು.
ವಂಚನೆ ಪ್ರಕರಣ ಪತ್ತೆ ಕಾರ್ಯಾಚರಣೆಯಲ್ಲಿ ರಾಜ್ಯದ 60 ಅಧಿಕಾರಿಗಳು ಭಾಗವಹಿಸಿದ್ದರು ಎಂದು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ. ಶಿಖಾ ತಿಳಿಸಿದ್ದಾರೆ. ಕೇರಳ, ತಮಿಳುನಾಡು ಜಿಎಸ್ಟಿ ಅಧಿಕಾರಿಗಳ ಸಹಯೋಗದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.