ADVERTISEMENT

ಬೆದರಿಕೆ ಆರೋಪ: ಎಚ್‌ಡಿಕೆ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ADGP ಚಂದ್ರಶೇಖರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಅಕ್ಟೋಬರ್ 2024, 14:46 IST
Last Updated 11 ಅಕ್ಟೋಬರ್ 2024, 14:46 IST
<div class="paragraphs"><p>ಎಡಿಜಿಪಿ ಎಂ. ಚಂದ್ರಶೇಖರ್‌,&nbsp;ಎಚ್‌.ಡಿ. ಕುಮಾರಸ್ವಾಮಿ</p></div>

ಎಡಿಜಿಪಿ ಎಂ. ಚಂದ್ರಶೇಖರ್‌, ಎಚ್‌.ಡಿ. ಕುಮಾರಸ್ವಾಮಿ

   

ಬೆಂಗಳೂರು: ತಮ್ಮ ಹಾಗೂ ಕುಟುಂಬದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಬೆಂಗಳೂರಿನ ಸಂಜಯ ನಗರ ‍ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕುಮಾರಸ್ವಾಮಿ ಅವರು ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ. ಸುಳ್ಳು ವೈದ್ಯಕೀಯ ದಾಖಲಾತಿಯನ್ನು ಪಡೆದು ಕರ್ನಾಟಕ ಕೇಡರ್‌ನಲ್ಲಿ ಮುಂದುವರೆಯುತ್ತಿರುವುದಾಗಿಯೂ, ಲಂಚ ಪಡೆದಿದ್ದಾಗಿಯೂ ಆರೋಪಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಅಲ್ಲದೆ ನಿಖಿಲ್ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ, ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಕುಮಾರಸ್ವಾಮಿ ಆಪ್ತ ಸುರೇಶ್ ಬಾಬು ಅವರೂ ನನ್ನ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಪತ್ರ ನೀಡಿದ್ದಾರೆ. ಆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರಿದ್ದಾರೆ.

ಚಂದ್ರಶೇಖರ್ ಅವರ ದೂರನ್ನು ಸ್ವೀಕರಿಸಿರುವ ಸಂಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.