ADVERTISEMENT

ಸಿದ್ದರಾಮಯ್ಯಗೆ ‘ಸಾಲ’ ಪ್ರಶಸ್ತಿ: ಅಶೋಕ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 15:47 IST
Last Updated 17 ಫೆಬ್ರುವರಿ 2024, 15:47 IST
ಆರ್ ಅಶೋಕ
ಆರ್ ಅಶೋಕ   

ನವದೆಹಲಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಆರ್ಥಿಕ ವರ್ಷದಲ್ಲಿ ₹1 ಲಕ್ಷ ಕೋಟಿ ಸಾಲ ಮಾಡುವುದಾಗಿ ಪ್ರಸ್ತಾಪಿಸಿದ್ದಾರೆ. ರಾಜ್ಯದ ಜನರ ಮೇಲೆ ತಲಾ ₹45 ಸಾವಿರ ಸಾಲದ ಭಾರ ಹೊರೆಸಿದ್ದಾರೆ. ಈ ವಿಷಯದಲ್ಲಿ ಅವರಿಗೆ ಪ್ರಶಸ್ತಿ ನೀಡಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ವ್ಯಂಗ್ಯವಾಡಿದರು. 

ಶನಿವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಹಂಕಾರದಿಂದ ಕೇಂದ್ರ ಸರ್ಕಾರವನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಇದರಿಂದ ರಾಜ್ಯದ ಜನರಿಗೆ ಅನ್ಯಾಯವಾಗಲಿದೆ. ಕೇಂದ್ರವನ್ನು ಓಲೈಕೆ ಮಾಡಿ ಹೆಚ್ಚು ಅನುದಾನ ತರಬೇಕು. ಸಚಿವನಾಗಿದ್ದಾಗ ಈ ರೀತಿ ಮಾಡಿ ಹೆಚ್ಚು ಅನುದಾನ ತಂದಿದ್ದೇನೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT