ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೊಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
ಪ್ರತಿ ಜಿಲ್ಲೆಯ ಒಂದೊಂದು ಶಾಲೆಯಲ್ಲಿ ಪ್ರಾಯೋಗಿಕವಾಗಿ ಬಯೊಮೆಟ್ರಿಕ್ ಅಳವಡಿಸಿ, ಹಾಜರಾತಿ ಪಡೆಯಲಾಗಿತ್ತು. ಯಾವುದೇ ತಾಂತ್ರಿಕ ದೋಷಗಳಿಲ್ಲದೆ ಪ್ರಯೋಗ ಯಶಸ್ವಿಯಾಗಿತ್ತು. ಹಾಗಾಗಿ, ರಾಜ್ಯದ ಎಲ್ಲ ಶಾಲೆಗಳಲ್ಲೂ ಬಯೊಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವ ಕುರಿತು ಇಲಾಖೆ ಯೋಜನಾ ವರದಿ ಸಿದ್ಧಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.