ADVERTISEMENT

ಬಿ.ಆರ್‌. ಪಾಟೀಲ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷ?

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 16:27 IST
Last Updated 23 ಜೂನ್ 2024, 16:27 IST
ಬಿ.ಆರ್‌. ಪಾಟೀಲ
ಬಿ.ಆರ್‌. ಪಾಟೀಲ   

ಬೆಂಗಳೂರು: ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ (ಹಿಂದಿನ ಕರ್ನಾಟಕ ರಾಜ್ಯ ಯೋಜನಾ ಮಂಡಳಿ) ಉಪಾಧ್ಯಕ್ಷರನ್ನಾಗಿ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್‌. ಪಾಟೀಲ ಅವರನ್ನು ನೇಮಿಸಿ ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದೇ 19ರಂದು ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಕಳುಹಿಸಿರುವ ಮುಖ್ಯಮಂತ್ರಿ, ‘ಪಾಟೀಲ ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ (ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ ಸೌಲಭ್ಯ) ತಕ್ಷಣ ನೇಮಕ ಆದೇಶ ಹೊರಡಿಸಬೇಕು’ ಎಂದೂ ಹೇಳಿದ್ದಾರೆ.

ಪಾಟೀಲ ಅವರು ಈಗ ಮುಖ್ಯಮಂತ್ರಿಯ ಸಲಹೆಗಾರ (‌ನೀತಿ ಮತ್ತು ಕಾರ್ಯಕ್ರಮ) ಆಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.