ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಮಣಿಪುರದಿಂದ ಭಾನುವಾರ ಆರಂಭಿಸಲಿರುವ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಭಾನುವಾರ ಬೆಳಿಗ್ಗೆ ನಗರದ ಎಚ್ಎಎಲ್ ವಿಮಾನ ನಿಲ್ದಾಣದಿಂದ ಪ್ರತ್ಯೇಕ ವಿಶೇಷ ವಿಮಾನಗಳಲ್ಲಿ ಮಣಿಪುರದ ರಾಜಧಾನಿ ಇಂಫಾಲ್ಗೆ ತೆರಳುವರು. ಅಲ್ಲಿಂದ ಪಾದಯಾತ್ರೆ ಆರಂಭವಾಗಲಿರುವ ಥೌಬಾಲ್ಗೆ ತೆರಳಿ, ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಪ್ರತ್ಯೇಕವಾಗಿಯೇ ನಗರಕ್ಕೆ ಹಿಂದಿರುಗುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.