ಬೆಂಗಳೂರು: ‘ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್ ಹಗರಣದ ದಾಖಲೆಗಳನ್ನು ವಿಚಾರಣಾ ಆಯೋಗದ ಮುಂದಿಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.
ನಾಮಫಲಕದಲ್ಲಿ ಕನ್ನಡ ಇರಲೇಬೇಕು: ಕನ್ನಡ ನಾಮಫಲಕ ಹಾಕಬೇಕೆಂದು ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧ ಇಲ್ಲ. ಆದರೆ, ಸಂಘಟನೆಗಳು ಶಾಂತಿಯುತ ಪ್ರತಿಭಟನೆ ಮಾಡಬೇಕು’ ಎಂದರು.
‘ಕಾನೂನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಬೇರೆ ಭಾಷೆಗಳ ಬಗ್ಗೆ ವಿರೋಧ ಇಲ್ಲ. ಆದರೆ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡ ಇರಲೇಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.