ಬೆಂಗಳೂರು: ರಾಜ್ಯ ಸರ್ಕಾರ ಜೂನ್ 27ರಂದು ಆಯೋಜಿಸಿರುವ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಹ್ವಾನಿಸದೇ ಇರುವುದನ್ನು ರಾಜ್ಯ ಒಕ್ಕಲಿಗರ ಸಂಘ ಖಂಡಿಸಿದೆ.
ದೇವೇಗೌಡರು ಸಮುದಾಯದ ಹಿರಿಯ ನಾಯಕ. ಅವರ ಪುತ್ರ ಕುಮಾರಸ್ವಾಮಿ ಕೇಂದ್ರ ಸಚಿವ. ಇಬ್ಬರನ್ನೂ ಆಹ್ವಾನಿಸದೇ ಇರುವುದು ಒಕ್ಕಲಿಗ ಸಮಾಜಕ್ಕೆ ಮಾಡಿದ ಅಪಮಾನ ಎಂದು ಸಂಘದ ಗೌರವಾಧ್ಯಕ್ಷ ಕೆಂಚಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಜಯಮುತ್ತು ಮತ್ತಿತರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.