ADVERTISEMENT

ಸದಸ್ಯತ್ವ ಅನರ್ಹತೆ | ಕಾಮಗಾರಿ ಗುತ್ತಿಗೆ ಚಾಲ್ತಿ ಅಗತ್ಯ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 10 ಮೇ 2024, 23:42 IST
Last Updated 10 ಮೇ 2024, 23:42 IST
<div class="paragraphs"><p>ಕರ್ನಾಟಕ ಹೈಕೋರ್ಟ್</p></div>

ಕರ್ನಾಟಕ ಹೈಕೋರ್ಟ್

   

ಬೆಂಗಳೂರು: "ಗ್ರಾಮ ಪಂಚಾಯಿತಿ ಸದಸ್ಯರು ಪಂಚಾಯಿತಿಗೆ ಸಂಬಂಧಿಸಿದಂತೆ ಪಡೆದಿರುವ ಕಾಮಗಾರಿ ಗುತ್ತಿಗೆ (ಒಪ್ಪಂದ) ಚಾಲ್ತಿಯಲ್ಲಿದ್ದರೆ ಮಾತ್ರವೇ ಅದು ಆತನ ಸದಸ್ಯತ್ವ ರದ್ದುಪಡಿಸಲು ಕಾರಣವಾಗುತ್ತದೆ" ಎಂದು ಹೈಕೋರ್ಟ್‌ ಪ್ರಕರಣವೊಂದರಲ್ಲಿ ಸ್ಪಷ್ಟಪಡಿಸಿದೆ.

"ಮಂಡ್ಯ ಜಿಲ್ಲೆಯ ಕೆ.ಆರ್‌. ಪೇಟೆ ತಾಲ್ಲೂಕಿನ ಬೀರುಹಳ್ಳಿ ಗ್ರಾಮ ಪಂಚಾಯಿತಿಯ ಗುತ್ತಿಗೆ ಕಾಮಗಾರಿ ಕೆಲಸ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಸದಸ್ಯ ಬಿ.ಎನ್.ಕುಮಾರ್ ಅವರನ್ನು ಅನರ್ಹಗೊಳಿಸಬೇಕು" ಎಂದು ಕೋರಿ ಗ್ರಾಮದ ನಿವಾಸಿ ಬಿ.ಟಿ.ಕುಮಾರ್‌ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನಿಲ್‌ ದತ್ ಯಾದವ್‌ ಅವರಿದ್ದ ಪೀಠ ವಜಾಗೊಳಿಸಿದೆ.

ADVERTISEMENT

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ-1993ರ ಕಲಂ 12 (ಎಚ್)ರ ಪ್ರಕಾರ ಗ್ರಾ.ಪಂ ಸದಸ್ಯರನ್ನು; ...ಅವರು ಪಂಚಾಯಿತಿಗೆ ಸೇರಿದ ಕಾಮಗಾರಿಗಳನ್ನು ಗುತ್ತಿಗೆ ಪಡೆದು, ಆ ಗುತ್ತಿಗೆಯ ಒಪ್ಪಂದ ಚಾಲ್ತಿಯಲ್ಲಿದ್ದರೆ ಮಾತ್ರವೇ ಸದಸ್ಯತ್ವ ಅನರ್ಹಗೊಳಿಸಲು ಕಾರಣವಾಗುವುದು. ಅದು ಬಿಟ್ಟು ಹಿಂದಿನ ವರ್ಷದ ಕಾಮಗಾರಿಗಳು ಅಂದರೆ ಅವರು ಸದಸ್ಯರಾಗುವ ಮುನ್ನ ಕಾಮಗಾರಿಗಳನ್ನು ನಡೆಸಿ, ಅದನ್ನು ಪೂರ್ಣಗೊಳಿಸಿದ್ದರೆ, ಅದರ ಆಧಾರದ ಮೇಲೆ ಸದಸ್ಯತ್ವ ರದ್ದುಪಡಿಸಲು ಸಾಧ್ಯವಿಲ್ಲ" ಎಂದು ನ್ಯಾಯಪೀಠ ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.