ADVERTISEMENT

ಸಿದ್ದರಾಮಯ್ಯ ಅಧಿಕಾರದಲ್ಲಿದ್ದೇ ತನಿಖೆ ಎದುರಿಸುವುದಾದರೆ CBIಗೆ ವಹಿಸಲಿ: ಜೋಶಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2024, 13:05 IST
Last Updated 28 ಸೆಪ್ಟೆಂಬರ್ 2024, 13:05 IST
<div class="paragraphs"><p>ಪ್ರಲ್ಹಾದ ಜೋಶಿ</p></div>

ಪ್ರಲ್ಹಾದ ಜೋಶಿ

   

ಧಾರವಾಡ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅಧಿಕಾರದಲ್ಲಿದ್ದೇ ಅವರು ತನಿಖೆ ಎದುರಿಸುವುದಾದರೆ ಪ‍್ರಕರಣವನ್ನು ಸಿಬಿಐಗೆ ವಹಿಸಬೇಕು’ ಎಂದು ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಚ್‌.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣ 2008ನೇ ಇಸವಿಯದು. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದರು. ಎಚ್‌ಡಿಕೆ ಪ್ರಕರಣದ ತನಿಖೆಗೆ ಆಗ ಯಾಕೆ ಒತ್ತಾಯಿಸಿಲ್ಲ?, 2018ರಿಂದ 2019 ಮಧ್ಯಭಾಗದವರೆಗೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದವರು ಯಾರು?’ ಎಂದು ಪ್ರಶ್ನಿಸಿದರು.

ADVERTISEMENT

‘ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯದ ಜನತೆ ನಿಚ್ಚಳ ಬಹುಮತ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರವನ್ನು ಪತನಗೊಳಿಸುವ ಉದ್ದೇಶ ಬಿಜೆಪಿಗೆ ಇಲ್ಲ. ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಯುತ್ತಿದೆ, ಅವರು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.