ADVERTISEMENT

ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ: ಸಚಿವ ಶಿವರಾಜ ತಂಗಡಗಿ 

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 11:42 IST
Last Updated 21 ಜೂನ್ 2024, 11:42 IST
ಶಿವರಾಜ ತಂಗಡಗಿ
ಶಿವರಾಜ ತಂಗಡಗಿ   

ಬೆಂಗಳೂರು: ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಡ್ಯದಲ್ಲೇ ಸಮ್ಮೇಳನ ನಡೆಯಲಿದೆ ಎಂದರು.

ಸಣ್ಣ ಪುಟ್ಟ ಸಮಸ್ಯೆಗಳಿದ್ದು, ಪರಿಷತ್‌ ಅಧ್ಯಕ್ಷರ ಜೊತೆ ಚರ್ಚೆ ನಡೆಸಿ ಎಲ್ಲವನ್ನೂ ಬಗೆಹರಿಸಲಾಗುವುದು ಎಂದು ಶಿವರಾಜ ತಂಗಡಗಿ ಹೇಳಿದರು.

ADVERTISEMENT

ಬರುವ ನವೆಂಬರ್‌–ಡಿಸೆಂಬರ್‌ನಲ್ಲಿ ಸಮ್ಮೇಳನಕ್ಕೆ ದಿನಾಂಕ ನಿಗದಿ ಮಾಡಲಾಗುವುದು ಎಂದು ತಂಗಡಗಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.