ADVERTISEMENT

ಕೇಂದ್ರ ಬರ ಪರಿಹಾರ ಕೊಡಿಸುವಂತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2024, 23:30 IST
Last Updated 23 ಮಾರ್ಚ್ 2024, 23:30 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಬರದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಪರಿಹಾರ ಕೊಡುತ್ತಿಲ್ಲ; ನೆರವಿಗೂ ಬರುತ್ತಿಲ್ಲ ಎಂದು ಆಪಾದಿಸಿದ್ದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಈಗ ತನ್ನ ಹೋರಾಟವನ್ನು ಸುಪ್ರೀಂ ಕೋರ್ಟ್‌ವರೆಗೆ ಒಯ್ದಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿ ಆರ್‌ಎಫ್‌) ತಕ್ಷಣ ಹಣ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕೇಂದ್ರದ ವಿರುದ್ಧ ರಾಜ್ಯ ಈ ಹಿಂದೆ ನಡೆಸುತ್ತಿರುವ ಹೋರಾಟ ಮತ್ತೊಂದು ಆಯಾಮ ಪಡೆದಿದೆ. ಕೇಂದ್ರದ ಜತೆ ರಾಜ್ಯ ಸರ್ಕಾರ ಪತ್ರ ವ್ಯವಹಾರ ನಡೆಸಿತ್ತು. ರಾಜ್ಯ ಸಚಿವರ ನಿಯೋಗವು ಕೇಂದ್ರ ಸಚಿವರನ್ನು ಭೇಟಿ ಮಾಡಿತ್ತು. ಪ್ರಧಾನಿ ಮತ್ತು ಗೃಹ ಸಚಿವರಿಗೆ ರಾಜ್ಯ ಸರ್ಕಾರದಿಂದ ಮನವಿಯನ್ನೂ ಸಲ್ಲಿಸಲಾಗಿತ್ತು. ಹಲವು ಸುತ್ತಿನ ಆಪಾದನಾ ಪರ್ವಗಳನ್ನು ನಡೆಸಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಸಚಿವ, ಶಾಸಕರ ದಂಡಿನೊಂದಿಗೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ಧರಣಿಯನ್ನೂ ನಡೆಸಿ ದೇಶದ ಗಮನ ಸೆಳೆದಿತ್ತು. ಈಗ ಕಾನೂನುಸಮರ ಸಾರಿದೆ. 

ADVERTISEMENT

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.