ADVERTISEMENT

Karnataka Rains | ಕರಾವಳಿಯಲ್ಲಿ ಭಾರಿ ಮಳೆ: ಪ್ರವಾಹದ ಆತಂಕ

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 13:46 IST
Last Updated 8 ಜುಲೈ 2024, 13:46 IST

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಬಿರುಸಿನ ಮಳೆಗೆ ನಗರ ಹಾಗೂ ಸುತ್ತಮುತ್ತಲಿನ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಉಡುಪಿ ನಗರದ ಗುಂಡಿಬೈಲು, ಪಾಡಿಗಾರು, ಕರಂಬಳ್ಳಿ ಪ್ರದೇಶದಲ್ಲಿ ಭಾರಿ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹ ಗೊಂಡು ವಾಹನ ಸವಾರರು ಪರದಾಡಿದರು. ಭಾರಿ ಮಳೆ ಮುಂದುವರಿದಿರುವುದರಿಂದ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.