ADVERTISEMENT

ಅಯೋಧ್ಯೆಯಂತೆ ಕಾಶಿ, ಮಥುರಾಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಬೇಕಿದೆ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 12:09 IST
Last Updated 5 ಆಗಸ್ಟ್ 2020, 12:09 IST
ಕೆ.ಎಸ್‌ ಈಶ್ವರಪ್ಪ
ಕೆ.ಎಸ್‌ ಈಶ್ವರಪ್ಪ    

ಶಿವಮೊಗ್ಗ: ಅಯೋಧ್ಯೆಯಂತೆಮಥುರಾ, ಕಾಶಿಗಳಲ್ಲೂಮಸೀದಿಗಳನ್ನುತೆರವುಗೊಳಿಸಿ,ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದ ನಿಮಿತ್ತ ಇಲ್ಲಿನಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿಬುಧವಾರ ಹಮ್ಮಿಕೊಂಡಿದ್ದಧರ್ಮಸಭೆಯಲ್ಲಿ ಅವರು ಮಾತನಾಡಿದರು.

ಕಾಶಿ ವಿಶ್ವನಾಥ, ಮಥುರಾ ಶ್ರೀಕೃಷ್ಣ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ತೆರಳಿದರೆ ಹಿಂದೂಗಳಗುಲಾಮತನ ಭಾಸವಾಗುತ್ತದೆ.ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲೂಆಗದ ಸ್ಥಿತಿ ಇದೆ.ಅಲ್ಲಿರುವ ಮಸೀದಿಗಳುಅಂತಹ ಮನೋಸ್ಥಿತಿ ಬಿಂಬಿಸುತ್ತವೆ ಎಂದುಅಭಿಪ್ರಾಯ ವ್ಯಕ್ತಪಡಿಸಿದರು.

ADVERTISEMENT

ಹಿಂದೂಗಳ ಧಾರ್ಮಿಕಶ್ರದ್ಧಾ ಕೇಂದ್ರಗಳಲ್ಲಿನ ಹಲವು ದೇವಸ್ಥಾನಗಳು ಧ್ವಂಸವಾಗಿವೆ. ಗುಲಾಮಗಿರಿಯ ಸಂತೇತವಾದ ಅಯೋಧ್ಯೆಯ ಮಸೀದಿ ತೆರವುಗೊಳಿಸಿದಂತೆ ಅಲ್ಲಿನ ಮಸೀದಿಗಳನ್ನು ತೆರವುಗೊಳಿಸಬೇಕಿದೆ. ಎಲ್ಲಾ ಶ್ರದ್ಧಾ ಕೇಂದ್ರಗಳೂ ಮಸೀದಿಗಳಿಂದ ಮುಕ್ತವಾಗಬೇಕಿದೆ ಎಂದರು.

‘ಲಾಠಿ ಗೋಲಿ ಖಾಯೆಂಗೆ ಮಂದೀರ್ ವಹೀ ಬನಾಯೇಂಗೆ’ ಎಂದು ಹೇಳಿದ್ದ ರೀತಿಯೇಇಂದು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.