ADVERTISEMENT

ತಿರುಪತಿ ಲಡ್ಡು ಪ್ರಸಾದಕ್ಕೆ ನಂದಿ‌ನಿ ತುಪ್ಪ

ಆರಂಭಿಕವಾಗಿ 350 ಟನ್ ತುಪ್ಪವನ್ನು ಸರಬರಾಜು ಮಾಡಲು ಟೆಂಡರ್‌ ಮೂಲಕ ಬೇಡಿಕೆ ಬಂದಿದೆ.

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2024, 16:15 IST
Last Updated 28 ಆಗಸ್ಟ್ 2024, 16:15 IST
ತುಪ್ಪದ ಟ್ಯಾಂಕರ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ಇದ್ದರು
ತುಪ್ಪದ ಟ್ಯಾಂಕರ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ಇದ್ದರು   

ಬೆಂಗಳೂರು:ತಿರುಮಲ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದಕ್ಕೆ ರಾಜ್ಯದ ನಂದಿನಿ ತುಪ್ಪವನ್ನು ಪೂರೈಕೆ ಮಾಡಲಾಗುತ್ತಿದ್ದು, ಟ್ಯಾಂಕರ್‌ ಮೂಲಕ ತುಪ್ಪ ಸಾಗಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಬುಧವಾರ ಚಾಲನೆ ನೀಡಿದರು.

ತಿರುಪತಿ ದೇವಸ್ಥಾನಕ್ಕೆ ಶ್ರೀವಾರಿ ಪ್ರಸಾದ ತಯಾರಿಕೆಗೆ ಹಲವು ವರ್ಷಗಳಿಂದ ಅಗ್ಮಾರ್ಕ್‌ ಸ್ಪೆಷಲ್‌ ಗ್ರೇಡ್‌ ಹೊಂದಿರುವ ನಂದಿನಿ ತುಪ್ಪವನ್ನು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಪೂರೈಸುತ್ತಿದೆ.

2013–14ನೇ ಸಾಲಿನಿಂದ 2021–22ರವರೆಗೆ 5 ಸಾವಿರ ಟನ್ ತುಪ್ಪವನ್ನು ತಿರುಪತಿ ದೇವಸ್ಥಾನಕ್ಕೆ ಸರಬರಾಜು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಆರಂಭಿಕವಾಗಿ 350 ಟನ್ ತುಪ್ಪವನ್ನು ಸರಬರಾಜು ಮಾಡಲು ಟೆಂಡರ್‌ ಮೂಲಕ ಬೇಡಿಕೆ ಬಂದಿದೆ. ಬೇಡಿಕೆಗೆ ಅನುಗುಣವಾಗಿ ಹಸುವಿನ ತುಪ್ಪವನ್ನು ಟ್ಯಾಂಕರ್‌ ಮೂಲಕ ಸರಬರಾಜು ಮಾಡಲಾಗುವುದು ಎಂದು ಕೆಎಂಎಫ್‌ ತಿಳಿಸಿದೆ.

ADVERTISEMENT

2022-23ನೇ ಸಾಲಿನಲ್ಲಿ ಟೆಂಡರ್ ಪ್ರಕ್ರಿಯೆ ವೇಳೆ ತೀವ್ರ ಸ್ಪರ್ಧೆ ಏರ್ಪಟ್ಟ ಕಾರಣ ತಿರುಪತಿ ದೇವಸ್ಥಾನಕ್ಕೆ ಕೆಎಂಎಫ್‌ ತುಪ್ಪ ಪೂರೈಸಿರಲಿಲ್ಲ. ‘ಈ ಹಿಂದಿನಂತೆಯೇ ತಿರುಪತಿ ತಿರುಮಲ ದೇವಸ್ಥಾನಕ್ಕೆ ತುಪ್ಪ ಪೂರೈಸಲು ಉತ್ಸುಕವಾಗಿದ್ದೇವೆ’ ಎಂದು ಟಿಟಿಡಿ ಆಡಳಿತ ಮಂಡಳಿಗೆ ಕೆಎಂಎಫ್ ಇತ್ತೀಚೆಗೆ ಪತ್ರ ಬರೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.