ಬೆಂಗಳೂರು: ಕೆಪಿಸಿಸಿ ಯುವ ಇಂಟಕ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜಿ. ಚಂದ್ರಶೇಖರ್ ನೇಮಕಗೊಂಡಿದ್ದಾರೆ.
ವಿಧಾನಪರಿಷತ್ ಸದಸ್ಯದ ಸಲೀಂ ಅಹಮದ್, ಬಿಎಂಟಿಸಿ ಮಾಜಿ ಉಪಾಧ್ಯಕ್ಷ ವಿ. ಎಸ್. ಆರಾಧ್ಯ, ಬಿಬಿಎಂಪಿ ಮಾಜಿ ಸದಸ್ಯ ಮೋಹನ್ ಕುಮಾರ್ ಮತ್ತು ಯುವ ಇಂಟಕ್ ಅಧ್ಯಕ್ಷ ಟಿ.ವೈ. ಅರುಣ್ ಅವರು ಚಂದ್ರಶೇಖರ್ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಚಂದ್ರಶೇಖರ್, ‘ಇಂಟಕ್ ವಿಭಾಗದಿಂದ ಶ್ರಮಿಕ ವರ್ಗದವರ ಸದಸ್ಯತ್ವ ಮಾಡಿಕೊಳ್ಳಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಮಿಕ ವರ್ಗವನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲುಪಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.